March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮಹಮ್ಮದ್ ಅವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya
error: Content is protected !!