24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮಹಮ್ಮದ್ ಅವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!