ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮಹಮ್ಮದ್ ಅವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!