26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮಹಮ್ಮದ್ ಅವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya
error: Content is protected !!