24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

ಮೂಡಬಿದಿರೆ: ಎನ್‌ಟಿಎ ನಡೆಸುವ ರಾಷ್ಟ್ರ ಮಟ್ಟದ ಇಂಜಿನಿಯರ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-2 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.


ಭಾರತೀಯ ತಂತ್ರಜ್ಞಾನ ಸಂಸ್ಥೆ ಜೆಇಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆಯಲು ನಡೆಸುವ ಈ ಪರೀಕ್ಷೆಯ ಈ ಬಾರಿಯ ಫಲಿತಾಂಶದಲ್ಲಿ ಸಂಸ್ಥೆಯ ಶಿಶಿರ್ ಶೆಟ್ಟಿ ರಾಷ್ಟçಮಟ್ಟದಲ್ಲಿ ೫೨೮ ನೇ ರ‍್ಯಾಂಕ್ ಪಡೆದಿದ್ದಾರೆ. ಅಲ್ಲದೆ ಸಂಸ್ಥೆಯ ಶ್ರೇಯಾಂಕ್ ಮನೋಹರ್ ಪೈ ರಾಷ್ಟçಮಟ್ಟದಲ್ಲಿ ೨೮೦೦ ನೇ ರ‍್ಯಾಂಕ್, ಕಾರ್ತಿಕ್ ಎಸ್ ೩೬೨೦ನೇ (eತಿs) ರ‍್ಯಾಂಕ್ ಸ್ಮಿರಾ ತಲ್ವಾರ್ ೪೮೦ ನೇ ರ‍್ಯಾಂಕ್ (ಛಿ), ಶ್ರೇಯಸ್ ಹೆಚ್.ಎಸ್ ೧೬೪೮(ಛಿ)ನೇ ರ‍್ಯಾಂಕ್, ಶೌರ್ಯ ಬಿ ತಲ್ವಾರ್ ೧೯೬೨ನೇ ರ‍್ಯಾಂಕ್(ಛಿ), ಪೂರ್ಣಚಂದ್ರ ೩೦೫೧ನೇ ರ‍್ಯಾಂಕ್(ಛಿ) ಪಡೆಯುದರೊಂದಿಗೆ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.


ಪರೀಕ್ಷೆಗೆ ಹಾಜರಾದ 97 ವಿದ್ಯಾರ್ಥಿಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ಎನ್‌ಟಿಎ ನಡೆಸುವ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೇದಿರುತ್ತಾರೆ. ಅದರಲ್ಲಿ 3ವಿದ್ಯಾರ್ಥಿಗಳು ೯೯ ಪರ್ಸೆಂಟೈಲ್‌ಗಿAತ ಹೆಚ್ಚು, ೫ ವಿದ್ಯಾರ್ಥಿಗಳು ೯೮ ಪರ್ಸೆಂಟೈಲ್‌ಗಿಂತ ಹೆಚ್ಚು ಮತ್ತು ೧೨ ವಿದ್ಯಾರ್ಥಿಗಳು 97 ಪರ್ಸೆಂಟೈಲ್‌ಗಿಂತ ಹೆಚ್ಚು,63ವಿದ್ಯಾರ್ಥಿಗಳು 90 ಪರ್ಸೆಂಟೈಲ್‌ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೆ.


ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಷ್ಟçಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

Related posts

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya
error: Content is protected !!