27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

ಮೂಡಬಿದಿರೆ: ಎನ್‌ಟಿಎ ನಡೆಸುವ ರಾಷ್ಟ್ರ ಮಟ್ಟದ ಇಂಜಿನಿಯರ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-2 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.


ಭಾರತೀಯ ತಂತ್ರಜ್ಞಾನ ಸಂಸ್ಥೆ ಜೆಇಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆಯಲು ನಡೆಸುವ ಈ ಪರೀಕ್ಷೆಯ ಈ ಬಾರಿಯ ಫಲಿತಾಂಶದಲ್ಲಿ ಸಂಸ್ಥೆಯ ಶಿಶಿರ್ ಶೆಟ್ಟಿ ರಾಷ್ಟçಮಟ್ಟದಲ್ಲಿ ೫೨೮ ನೇ ರ‍್ಯಾಂಕ್ ಪಡೆದಿದ್ದಾರೆ. ಅಲ್ಲದೆ ಸಂಸ್ಥೆಯ ಶ್ರೇಯಾಂಕ್ ಮನೋಹರ್ ಪೈ ರಾಷ್ಟçಮಟ್ಟದಲ್ಲಿ ೨೮೦೦ ನೇ ರ‍್ಯಾಂಕ್, ಕಾರ್ತಿಕ್ ಎಸ್ ೩೬೨೦ನೇ (eತಿs) ರ‍್ಯಾಂಕ್ ಸ್ಮಿರಾ ತಲ್ವಾರ್ ೪೮೦ ನೇ ರ‍್ಯಾಂಕ್ (ಛಿ), ಶ್ರೇಯಸ್ ಹೆಚ್.ಎಸ್ ೧೬೪೮(ಛಿ)ನೇ ರ‍್ಯಾಂಕ್, ಶೌರ್ಯ ಬಿ ತಲ್ವಾರ್ ೧೯೬೨ನೇ ರ‍್ಯಾಂಕ್(ಛಿ), ಪೂರ್ಣಚಂದ್ರ ೩೦೫೧ನೇ ರ‍್ಯಾಂಕ್(ಛಿ) ಪಡೆಯುದರೊಂದಿಗೆ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.


ಪರೀಕ್ಷೆಗೆ ಹಾಜರಾದ 97 ವಿದ್ಯಾರ್ಥಿಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ಎನ್‌ಟಿಎ ನಡೆಸುವ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೇದಿರುತ್ತಾರೆ. ಅದರಲ್ಲಿ 3ವಿದ್ಯಾರ್ಥಿಗಳು ೯೯ ಪರ್ಸೆಂಟೈಲ್‌ಗಿAತ ಹೆಚ್ಚು, ೫ ವಿದ್ಯಾರ್ಥಿಗಳು ೯೮ ಪರ್ಸೆಂಟೈಲ್‌ಗಿಂತ ಹೆಚ್ಚು ಮತ್ತು ೧೨ ವಿದ್ಯಾರ್ಥಿಗಳು 97 ಪರ್ಸೆಂಟೈಲ್‌ಗಿಂತ ಹೆಚ್ಚು,63ವಿದ್ಯಾರ್ಥಿಗಳು 90 ಪರ್ಸೆಂಟೈಲ್‌ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೆ.


ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಷ್ಟçಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

Related posts

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya
error: Content is protected !!