April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

ಬೆಳ್ತಂಗಡಿ: ಎ.25 ರಿಂದ ಮೇ 3 ರವರೆಗೆ ತೆಕ್ಕಾರು ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕು ಮಟ್ಟದಿಂದ ಹೊರ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನ ಸಭೆಯನ್ನು ನಡೆಸಲಾಯಿತು.

ಈ ವೇಳೆ ತಾಲೂಕಿನ ಪ್ರತಿ ಗ್ರಾಮದಿಂದ ಹೊರೆ ಕಾಣಿಕೆ ತೆಗೆದುಕೊಂಡು ಬರುವುವಂತೆ ವಿನಂತಿಸಲಾಯಿತು. ಎ.27 ರಂದು ಬೆಳಿಗ್ಗೆ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನ ಹಾಗೂ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಏಕಕಾಲದಲ್ಲಿ ಹೊರೆ ಕಾಣಿಕೆ ಉದ್ಘಾಟನೆಗೊಳ್ಳಲಿದ್ದು ಪ್ರತಿ ಗ್ರಾಮದ ಭಕ್ತರು ಹೊರೆಕಾಣಿಕೆ ಸಮರ್ಪಿಸಬೇಕೆಂದು ಹಾಗೂ ಎ. 30 ರಂದು ಪ್ರತಿಷ್ಠಾ ದಿವಸದಂದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಬರಬೇಕೆಂದು ವಿನಂತಿಸಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಸಂಚಾಲಕ ಹರೀಶ್ ಪೂಂಜ ಹಾಗೂ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಹಾಗೂ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ನವೀನ್ ನೆರಿಯ ಹಾಗೂ ತಾಲೂಕಿನ ಎಲ್ಲಾ ಧಾರ್ಮಿಕ ಮುಖಂಡರುಗಳು ಉಪಸ್ಥಿತರಿದ್ದರು.

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!