22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

ಬೆಳ್ತಂಗಡಿ: ಎ.25 ರಿಂದ ಮೇ 3 ರವರೆಗೆ ತೆಕ್ಕಾರು ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕು ಮಟ್ಟದಿಂದ ಹೊರ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನ ಸಭೆಯನ್ನು ನಡೆಸಲಾಯಿತು.

ಈ ವೇಳೆ ತಾಲೂಕಿನ ಪ್ರತಿ ಗ್ರಾಮದಿಂದ ಹೊರೆ ಕಾಣಿಕೆ ತೆಗೆದುಕೊಂಡು ಬರುವುವಂತೆ ವಿನಂತಿಸಲಾಯಿತು. ಎ.27 ರಂದು ಬೆಳಿಗ್ಗೆ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನ ಹಾಗೂ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಏಕಕಾಲದಲ್ಲಿ ಹೊರೆ ಕಾಣಿಕೆ ಉದ್ಘಾಟನೆಗೊಳ್ಳಲಿದ್ದು ಪ್ರತಿ ಗ್ರಾಮದ ಭಕ್ತರು ಹೊರೆಕಾಣಿಕೆ ಸಮರ್ಪಿಸಬೇಕೆಂದು ಹಾಗೂ ಎ. 30 ರಂದು ಪ್ರತಿಷ್ಠಾ ದಿವಸದಂದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಬರಬೇಕೆಂದು ವಿನಂತಿಸಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಸಂಚಾಲಕ ಹರೀಶ್ ಪೂಂಜ ಹಾಗೂ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಹಾಗೂ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ನವೀನ್ ನೆರಿಯ ಹಾಗೂ ತಾಲೂಕಿನ ಎಲ್ಲಾ ಧಾರ್ಮಿಕ ಮುಖಂಡರುಗಳು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!