April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

ಬೆಳ್ತಂಗಡಿ: ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪ್ ನಿಧನದಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ಧರ್ಮಪ್ರಾಂತ್ಯಕ್ಕೆ ಸಂಬಂಧಪಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು ಘೋಷಿಸಲಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿ, ಸಂತ ಲಾರೆನ್ಸರ ಕ್ಯಾಥಿಡ್ರಲ್ ದೇವಾಲಯದಲ್ಲಿ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ರವರು ವಿಶೇಷ ಪೂಜೆ ಸಲ್ಲಿಸಿ ಪೋಪ್ ರಿಗಾಗಿ ಪ್ರಾರ್ಥನೆ ಮಾಡಿದರು. ಧರ್ಮಕ್ಷೇತ್ರದ ಬಿಷಪ್ ಹೌಸ್ ಮತ್ತು ಪಾಲನಾ ಕೇಂದ್ರದ ಎಲ್ಲ ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗು ವಿಶ್ವಾಸಿಗಳು ಹಾಜರಿದ್ದರು.

ವಿಶೇಷ ಪೂಜೆಯ ಸಂದೇಶದ ಸಮಯದಲ್ಲಿ ಪರಮ ಪೂಜ್ಯರು ಪೋಪೆರನ್ನು ಭೇಟಿಮಾಡಿದ ಸವಿನೆನಪುಗಳನ್ನು ಹಂಚಿಕ್ಕೊಳ್ಳುತ್ತಾ, “ಪೋಪರಿಗೆ ಭಾರತದ ಕ್ರಿಶ್ಚಿಯನ್ನರ ಕುರಿತು ವಿಶೇಷ ಕಾಳಜಿ ಇತ್ತು, ಅದರಲ್ಲೂ ಬೆಳ್ತಂಗಡಿ ಧರ್ಮಕ್ಷೇತ್ರದ ಎಲ್ಲಾ ಚಟುವಟಿಕೆಗಳ ಕುರಿತು ಕೇಳಿತಿಳಿಯುತ್ತಿದ್ದರು” ಎಂದು ನುಡಿದರು. ಪೋಪ್ ಫ್ರಾನ್ಸಿಸ್ ರವ ಅಸಾನಿಧ್ಯವು ಧರ್ಮಸಭೆಯಲ್ಲೂ ಇಡೀ ಜಗತ್ತಿನಲ್ಲೂ ತುಂಬಲಾಗದ ನಷ್ಟಭರಿಸಲಾಗಿದೆ. ಪೋಪ್ ಫ್ರಾನ್ಸಿಸ್ ರವರ ಶಾಂತಿಯ ಮತ್ತು ಕರುಣೆಯ ಸಂದೇಶವು ಜಗಕೆ ಸಮಾಧಾನವನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಪರಮ ಪೂಜ್ಯ ಲಾರೆನ್ಸರವರು ಸಂತಾಪ ಸೂಚಿಸಿದರು.

Related posts

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!