September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

ಬೆಳ್ತಂಗಡಿ: ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪ್ ನಿಧನದಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ಧರ್ಮಪ್ರಾಂತ್ಯಕ್ಕೆ ಸಂಬಂಧಪಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು ಘೋಷಿಸಲಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿ, ಸಂತ ಲಾರೆನ್ಸರ ಕ್ಯಾಥಿಡ್ರಲ್ ದೇವಾಲಯದಲ್ಲಿ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ರವರು ವಿಶೇಷ ಪೂಜೆ ಸಲ್ಲಿಸಿ ಪೋಪ್ ರಿಗಾಗಿ ಪ್ರಾರ್ಥನೆ ಮಾಡಿದರು. ಧರ್ಮಕ್ಷೇತ್ರದ ಬಿಷಪ್ ಹೌಸ್ ಮತ್ತು ಪಾಲನಾ ಕೇಂದ್ರದ ಎಲ್ಲ ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗು ವಿಶ್ವಾಸಿಗಳು ಹಾಜರಿದ್ದರು.

ವಿಶೇಷ ಪೂಜೆಯ ಸಂದೇಶದ ಸಮಯದಲ್ಲಿ ಪರಮ ಪೂಜ್ಯರು ಪೋಪೆರನ್ನು ಭೇಟಿಮಾಡಿದ ಸವಿನೆನಪುಗಳನ್ನು ಹಂಚಿಕ್ಕೊಳ್ಳುತ್ತಾ, “ಪೋಪರಿಗೆ ಭಾರತದ ಕ್ರಿಶ್ಚಿಯನ್ನರ ಕುರಿತು ವಿಶೇಷ ಕಾಳಜಿ ಇತ್ತು, ಅದರಲ್ಲೂ ಬೆಳ್ತಂಗಡಿ ಧರ್ಮಕ್ಷೇತ್ರದ ಎಲ್ಲಾ ಚಟುವಟಿಕೆಗಳ ಕುರಿತು ಕೇಳಿತಿಳಿಯುತ್ತಿದ್ದರು” ಎಂದು ನುಡಿದರು. ಪೋಪ್ ಫ್ರಾನ್ಸಿಸ್ ರವ ಅಸಾನಿಧ್ಯವು ಧರ್ಮಸಭೆಯಲ್ಲೂ ಇಡೀ ಜಗತ್ತಿನಲ್ಲೂ ತುಂಬಲಾಗದ ನಷ್ಟಭರಿಸಲಾಗಿದೆ. ಪೋಪ್ ಫ್ರಾನ್ಸಿಸ್ ರವರ ಶಾಂತಿಯ ಮತ್ತು ಕರುಣೆಯ ಸಂದೇಶವು ಜಗಕೆ ಸಮಾಧಾನವನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಪರಮ ಪೂಜ್ಯ ಲಾರೆನ್ಸರವರು ಸಂತಾಪ ಸೂಚಿಸಿದರು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!