25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

ಬೆಳ್ತಂಗಡಿ: ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪ್ ನಿಧನದಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ಧರ್ಮಪ್ರಾಂತ್ಯಕ್ಕೆ ಸಂಬಂಧಪಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು ಘೋಷಿಸಲಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿ, ಸಂತ ಲಾರೆನ್ಸರ ಕ್ಯಾಥಿಡ್ರಲ್ ದೇವಾಲಯದಲ್ಲಿ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ರವರು ವಿಶೇಷ ಪೂಜೆ ಸಲ್ಲಿಸಿ ಪೋಪ್ ರಿಗಾಗಿ ಪ್ರಾರ್ಥನೆ ಮಾಡಿದರು. ಧರ್ಮಕ್ಷೇತ್ರದ ಬಿಷಪ್ ಹೌಸ್ ಮತ್ತು ಪಾಲನಾ ಕೇಂದ್ರದ ಎಲ್ಲ ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗು ವಿಶ್ವಾಸಿಗಳು ಹಾಜರಿದ್ದರು.

ವಿಶೇಷ ಪೂಜೆಯ ಸಂದೇಶದ ಸಮಯದಲ್ಲಿ ಪರಮ ಪೂಜ್ಯರು ಪೋಪೆರನ್ನು ಭೇಟಿಮಾಡಿದ ಸವಿನೆನಪುಗಳನ್ನು ಹಂಚಿಕ್ಕೊಳ್ಳುತ್ತಾ, “ಪೋಪರಿಗೆ ಭಾರತದ ಕ್ರಿಶ್ಚಿಯನ್ನರ ಕುರಿತು ವಿಶೇಷ ಕಾಳಜಿ ಇತ್ತು, ಅದರಲ್ಲೂ ಬೆಳ್ತಂಗಡಿ ಧರ್ಮಕ್ಷೇತ್ರದ ಎಲ್ಲಾ ಚಟುವಟಿಕೆಗಳ ಕುರಿತು ಕೇಳಿತಿಳಿಯುತ್ತಿದ್ದರು” ಎಂದು ನುಡಿದರು. ಪೋಪ್ ಫ್ರಾನ್ಸಿಸ್ ರವ ಅಸಾನಿಧ್ಯವು ಧರ್ಮಸಭೆಯಲ್ಲೂ ಇಡೀ ಜಗತ್ತಿನಲ್ಲೂ ತುಂಬಲಾಗದ ನಷ್ಟಭರಿಸಲಾಗಿದೆ. ಪೋಪ್ ಫ್ರಾನ್ಸಿಸ್ ರವರ ಶಾಂತಿಯ ಮತ್ತು ಕರುಣೆಯ ಸಂದೇಶವು ಜಗಕೆ ಸಮಾಧಾನವನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಪರಮ ಪೂಜ್ಯ ಲಾರೆನ್ಸರವರು ಸಂತಾಪ ಸೂಚಿಸಿದರು.

Related posts

ಉಜಿರೆ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

Suddi Udaya
error: Content is protected !!