22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

ಬೆಳ್ತಂಗಡಿ: ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪ್ ನಿಧನದಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ಧರ್ಮಪ್ರಾಂತ್ಯಕ್ಕೆ ಸಂಬಂಧಪಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು ಘೋಷಿಸಲಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿ, ಸಂತ ಲಾರೆನ್ಸರ ಕ್ಯಾಥಿಡ್ರಲ್ ದೇವಾಲಯದಲ್ಲಿ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ರವರು ವಿಶೇಷ ಪೂಜೆ ಸಲ್ಲಿಸಿ ಪೋಪ್ ರಿಗಾಗಿ ಪ್ರಾರ್ಥನೆ ಮಾಡಿದರು. ಧರ್ಮಕ್ಷೇತ್ರದ ಬಿಷಪ್ ಹೌಸ್ ಮತ್ತು ಪಾಲನಾ ಕೇಂದ್ರದ ಎಲ್ಲ ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗು ವಿಶ್ವಾಸಿಗಳು ಹಾಜರಿದ್ದರು.

ವಿಶೇಷ ಪೂಜೆಯ ಸಂದೇಶದ ಸಮಯದಲ್ಲಿ ಪರಮ ಪೂಜ್ಯರು ಪೋಪೆರನ್ನು ಭೇಟಿಮಾಡಿದ ಸವಿನೆನಪುಗಳನ್ನು ಹಂಚಿಕ್ಕೊಳ್ಳುತ್ತಾ, “ಪೋಪರಿಗೆ ಭಾರತದ ಕ್ರಿಶ್ಚಿಯನ್ನರ ಕುರಿತು ವಿಶೇಷ ಕಾಳಜಿ ಇತ್ತು, ಅದರಲ್ಲೂ ಬೆಳ್ತಂಗಡಿ ಧರ್ಮಕ್ಷೇತ್ರದ ಎಲ್ಲಾ ಚಟುವಟಿಕೆಗಳ ಕುರಿತು ಕೇಳಿತಿಳಿಯುತ್ತಿದ್ದರು” ಎಂದು ನುಡಿದರು. ಪೋಪ್ ಫ್ರಾನ್ಸಿಸ್ ರವ ಅಸಾನಿಧ್ಯವು ಧರ್ಮಸಭೆಯಲ್ಲೂ ಇಡೀ ಜಗತ್ತಿನಲ್ಲೂ ತುಂಬಲಾಗದ ನಷ್ಟಭರಿಸಲಾಗಿದೆ. ಪೋಪ್ ಫ್ರಾನ್ಸಿಸ್ ರವರ ಶಾಂತಿಯ ಮತ್ತು ಕರುಣೆಯ ಸಂದೇಶವು ಜಗಕೆ ಸಮಾಧಾನವನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಪರಮ ಪೂಜ್ಯ ಲಾರೆನ್ಸರವರು ಸಂತಾಪ ಸೂಚಿಸಿದರು.

Related posts

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

Suddi Udaya
error: Content is protected !!