April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೊಳಿಸಲು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯರು ಆಗ್ರಹಿಸಿದ್ದಾರೆ.

ಹಲವು ವರ್ಷಗಳಿಂದ ಈ ರಸ್ತೆಗಳ ಅಭಿವೃದ್ಧಿಗೆ ಬೇಡಿಕೆ ನೀಡುತ್ತಾ ಬಂದಿದ್ದು ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ತೆಕ್ಕಾರು ಗ್ರಾಮದಲ್ಲಿ ನೂರಾರು ವರ್ಷದ ಹಿಂದಿನ ದೇವಾಲಯ ಪುನರುತ್ಥಾನಗೊಂಡು ಉತ್ಸವಕ್ಕೆ ತಯಾರಿಯಾಗಿದೆ. ಗೋಪಾಲಕೃಷ್ಣ ದೇವರ ಬ್ರಹ್ಮಕಲಶದ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವ ನೀರಿಕ್ಷೆಯಿದೆ. ಈ ಎಲ್ಲಾ ಅಂಶಗಳನ್ನು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆಗೆ ಗಮನಹರಿಸಬೇಕು. ಬಾಜಾರು-ಜೋಡುಕಟ್ಟೆ 750 ಮೀಟರ್, ಕೊಡಿಬೆಟ್ಟು-ದೇವರಗುಡ್ಡೆ 350 ಮೀ., ದೇವರಗುಡ್ಡೆ-ತೆಕ್ಕಾರು ಸುಮಾರು 2 ಕೀ.ಮೀ. ಉದ್ದದ ರಸ್ತೆಗೆ ಪಿಎಂಜಿ ಯೋಜನೆ ಮೂಲಕ ಡಾಮರೀಕರಣ ಮಾಡಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವಿಲ್ಲ, ಶೀಘ್ರವಾಗಿ ರಸ್ತೆ ಅಭಿವೃದ್ಧಿಗೊಳಿಸಬೇಕು ಎಂದು ಸದಸ್ಯರು ಆಗ್ರಹಿಸಿದ್ದಾರೆ.

Related posts

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya
error: Content is protected !!