25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೊಳಿಸಲು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯರು ಆಗ್ರಹಿಸಿದ್ದಾರೆ.

ಹಲವು ವರ್ಷಗಳಿಂದ ಈ ರಸ್ತೆಗಳ ಅಭಿವೃದ್ಧಿಗೆ ಬೇಡಿಕೆ ನೀಡುತ್ತಾ ಬಂದಿದ್ದು ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ತೆಕ್ಕಾರು ಗ್ರಾಮದಲ್ಲಿ ನೂರಾರು ವರ್ಷದ ಹಿಂದಿನ ದೇವಾಲಯ ಪುನರುತ್ಥಾನಗೊಂಡು ಉತ್ಸವಕ್ಕೆ ತಯಾರಿಯಾಗಿದೆ. ಗೋಪಾಲಕೃಷ್ಣ ದೇವರ ಬ್ರಹ್ಮಕಲಶದ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವ ನೀರಿಕ್ಷೆಯಿದೆ. ಈ ಎಲ್ಲಾ ಅಂಶಗಳನ್ನು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆಗೆ ಗಮನಹರಿಸಬೇಕು. ಬಾಜಾರು-ಜೋಡುಕಟ್ಟೆ 750 ಮೀಟರ್, ಕೊಡಿಬೆಟ್ಟು-ದೇವರಗುಡ್ಡೆ 350 ಮೀ., ದೇವರಗುಡ್ಡೆ-ತೆಕ್ಕಾರು ಸುಮಾರು 2 ಕೀ.ಮೀ. ಉದ್ದದ ರಸ್ತೆಗೆ ಪಿಎಂಜಿ ಯೋಜನೆ ಮೂಲಕ ಡಾಮರೀಕರಣ ಮಾಡಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವಿಲ್ಲ, ಶೀಘ್ರವಾಗಿ ರಸ್ತೆ ಅಭಿವೃದ್ಧಿಗೊಳಿಸಬೇಕು ಎಂದು ಸದಸ್ಯರು ಆಗ್ರಹಿಸಿದ್ದಾರೆ.

Related posts

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

Suddi Udaya

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya
error: Content is protected !!