April 22, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯುವಕರ ವಿರುದ್ದ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈ ಕೋರ್ಟ್ ಜಾಮೀನು ನೀಡಿದೆ.ಘಟನೆ ಆಧರಿಸಿ ಬೆಳ್ತಂಗಡಿ ಪೋಲಿಸರು ಮೂವರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ, ಕಲಂ 109,351(2) ಜೊತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಇದೀಗ ಮೊದಲ ಆರೋಪಿ, ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಸದ್ರಿ ಪ್ರಕರಣ ಕಳೆದ ಫೆಬ್ರವರಿ 5 ರಂದು ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ.

ಎ.21ರಂದು ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿತು.ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕರ್ ವಾದವನ್ನು ಮಂಡಿಸಿದ್ದಾರೆ.

Related posts

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!