23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯುವಕರ ವಿರುದ್ದ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈ ಕೋರ್ಟ್ ಜಾಮೀನು ನೀಡಿದೆ.ಘಟನೆ ಆಧರಿಸಿ ಬೆಳ್ತಂಗಡಿ ಪೋಲಿಸರು ಮೂವರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ, ಕಲಂ 109,351(2) ಜೊತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಇದೀಗ ಮೊದಲ ಆರೋಪಿ, ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಸದ್ರಿ ಪ್ರಕರಣ ಕಳೆದ ಫೆಬ್ರವರಿ 5 ರಂದು ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ.

ಎ.21ರಂದು ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿತು.ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕರ್ ವಾದವನ್ನು ಮಂಡಿಸಿದ್ದಾರೆ.

Related posts

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!