22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯುವಕರ ವಿರುದ್ದ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈ ಕೋರ್ಟ್ ಜಾಮೀನು ನೀಡಿದೆ.ಘಟನೆ ಆಧರಿಸಿ ಬೆಳ್ತಂಗಡಿ ಪೋಲಿಸರು ಮೂವರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ, ಕಲಂ 109,351(2) ಜೊತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಇದೀಗ ಮೊದಲ ಆರೋಪಿ, ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಸದ್ರಿ ಪ್ರಕರಣ ಕಳೆದ ಫೆಬ್ರವರಿ 5 ರಂದು ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ.

ಎ.21ರಂದು ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿತು.ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕರ್ ವಾದವನ್ನು ಮಂಡಿಸಿದ್ದಾರೆ.

Related posts

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya
error: Content is protected !!