September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯುವಕರ ವಿರುದ್ದ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈ ಕೋರ್ಟ್ ಜಾಮೀನು ನೀಡಿದೆ.ಘಟನೆ ಆಧರಿಸಿ ಬೆಳ್ತಂಗಡಿ ಪೋಲಿಸರು ಮೂವರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ, ಕಲಂ 109,351(2) ಜೊತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಇದೀಗ ಮೊದಲ ಆರೋಪಿ, ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಸದ್ರಿ ಪ್ರಕರಣ ಕಳೆದ ಫೆಬ್ರವರಿ 5 ರಂದು ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ.

ಎ.21ರಂದು ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿತು.ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕರ್ ವಾದವನ್ನು ಮಂಡಿಸಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಹರೀಶ್ ಕೆ. ಸಾಲ್ಯಾನ್ ಆಯ್ಕೆ

Suddi Udaya

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya
error: Content is protected !!