25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯುವಕರ ವಿರುದ್ದ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈ ಕೋರ್ಟ್ ಜಾಮೀನು ನೀಡಿದೆ.ಘಟನೆ ಆಧರಿಸಿ ಬೆಳ್ತಂಗಡಿ ಪೋಲಿಸರು ಮೂವರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ, ಕಲಂ 109,351(2) ಜೊತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಇದೀಗ ಮೊದಲ ಆರೋಪಿ, ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಸದ್ರಿ ಪ್ರಕರಣ ಕಳೆದ ಫೆಬ್ರವರಿ 5 ರಂದು ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ.

ಎ.21ರಂದು ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿತು.ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕರ್ ವಾದವನ್ನು ಮಂಡಿಸಿದ್ದಾರೆ.

Related posts

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!