23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಸಂಸ್ಥೆಯು, ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರು ಮತ್ತು ಬೆಂಗಳೂರಿನ ಜಿ ಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಕಾರದೊಂದಿಗೆ ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್(OT) ಸುಮಾರು 9 ಲಕ್ಷಕ್ಕೂ ಅಧಿಕ ಮೊತ್ತದಲ್ಲಿ ಸಂಪೂರ್ಣವಾಗಿ ನವೀಕರಣಗೊಳಿಸಿದ್ದು ಇದರ ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ತಾಲೂಕು ಪಶು ಆಸ್ಪತ್ರೆಯ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿ ಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ರೋ. ಜಗದೀಶ್ ಮುಗುಳಿ ಮತ್ತು ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರಿನ ಅಧ್ಯಕ್ಷೆ ರೋ. ಸುಪ್ರಿಯಾ ಖಾಂಡರಿ ರಿಬ್ಬನ್ ಎಳೆದು ನಾಮ ಫಲಕ ಅನಾವರಣ ಗೊಳಿಸುವ ಮೂಲಕ ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಗೇ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಮಾತಾನಾಡಿ ಸಮಾಜದ ಮೇಲಿನ ಕಾಳಜಿ ಮತ್ತು ಅಭಿವೃದ್ಧಿಯ ದೂರದೃಷ್ಟಿತ್ವ ಇದ್ದುದರಿಂದ ಈ ಕಾರ್ಯ ಯಶಸ್ವಿಯಾಗಿದೆ. ಒಂದು ಸರ್ಕಾರಿ ಪಶು ವೈದ್ಯಕೀಯ ಚಿಕಿತ್ಸಾಲಯವನ್ನು ಸಂಘ ಸಂಸ್ಥೆಯೊಂದು ಅಭಿವೃದ್ಧಿ ಪಡಿಸಿರುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮೊದಲ ಉದಾಹರಣೆ.ಈ ಕಾರ್ಯ ಇತರೆ ಸಂಘ ಸಂಸ್ಥೆಗಳಿಗೆ ಮಾದರಿ. ಈಗೀನ ಸಂದರ್ಭದಲ್ಲಿ ಇಲ್ಲಾ ಸೇವಾ ಕಾರ್ಯಗಳನ್ನು ಸರ್ಕಾರದ ವತಿಯಿಂದ ಮಾಡಲು ಅಸಾಧ್ಯವಾಗಿದೆ. ಇಂತಹ ಸಂದರ್ಭದಲ್ಲಿ ರೋಟರಿಯಂತ ಸಂಘ ಸಂಸ್ಥೆಗಳು ಜೊತೆ ಸೇರಿದಾಗ ಸ್ವಾಸ್ಥ್ಯಸಮಾಜ ನಿರ್ಮಾಣವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪ್ ಸಿಂಹ ನಾಯಕ್ , ಕಾರ್ಯದರ್ಶಿ ರೋ ನರಸಿಂಹನ್ ಕಣ್ಣನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ. ಪೂರನ್ ವರ್ಮ, ಕಾರ್ಯದರ್ಶಿ ರೋ. ಸಂದೇಶ್ ಕುಮಾರ್ ರಾವ್, ಡಾ. ಅರುಣ್ ಕುಮಾರ್ ಶೆಟ್ಟಿ ಉಪ ನಿರ್ದೇಶಕರು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮಂಗಳೂರು, ಡಾ. ಶಿವಣ್ಣ ಜಂಟಿ ನಿರ್ದೇಶಕರು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮಂಗಳೂರು, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಸೇರಿದಂತೆ ಇಂದಿರಾನಗರ ಬೆಂಗಳೂರು ಮತ್ತು ಬೆಳ್ತಂಗಡಿ ರೋಟರಿಯ ಸರ್ವ ಸದಸ್ಯರು ಹಾಗು ತಾಲೂಕು ಪಶು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ರವಿಕುಮಾರ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಜಿ ಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ರೋ. ಜಗದೀಶ್ ಮುಗುಳಿ, ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರಿನ ಅಧ್ಯಕ್ಷೆ ರೋ. ಸುಪ್ರಿಯಾ ಖಾಂಡರಿ, ಕಾರ್ಯದರ್ಶಿ ರೋ ನರಸಿಂಹನ್ ಕಣ್ಣನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ. ಪೂರನ್ ವರ್ಮ, ಕಾರ್ಯದರ್ಶಿ ರೋ. ಸಂದೇಶ್ ಕುಮಾರ್ ರಾವ್ ರವರನ್ನು ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಬೆಳ್ತಂಗಡಿ ತಾಲೂಕಿ ಪಶು ಪಾಲನಾ ಆಸ್ಪತ್ರೆಯ ವತಿಯಿಂದ ಶಾಸಕ ಹರೀಶ್ ಪೂಂಜ ಮತ್ತು ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ತಾಲೂಕಿನ ಹಿರಿಯ ವಕೀಲ ರೋ. ಧನಂಜಯ ರಾವ್ ನಿರೂಪಿಸಿ, ತಾಲೂಕು ಪಶು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ರವಿಕುಮಾರ್ ವಂದಿಸಿದರು.

Related posts

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!