24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮಹಮ್ಮದ್ ಅವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!