23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮಹಮ್ಮದ್ ಅವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya
error: Content is protected !!