27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

ಮೂಡುಬಿದಿರೆ: ಕಲ್ಲಬೆಟ್ಟುವಿನ ನ್ಯೂ ವೈಬ್ರೆಂಟ್ ಕಾಲೇಜಿನ ಆವರಣದಲ್ಲಿ ನೀಟ್ ಲಾಂಗ್ ಟರ್ಮ್ ಡೇ 2025 ನಡೆಯಿತು.


ನ್ಯೂ ವೈಬ್ರೆಂಟ್ ಪಿ ಯು ಕಾಲೇಜು ತನ್ನ ಶೈಕ್ಷಣಿಕ ಸಾಧನೆಯೊಂದಿಗೆ ಉತ್ತಮ ಫಲಿತಾಂಶದೊಂದಿಗೆ ಹೆಸರುವಾಸಿಯಾಗುದರ ಜೊತೆಗೆ ಇದೀಗ ವಿನೂತನ ಕಾರ್ಯಕ್ರಮದ ಮೂಲಕ ಮಾದರಿ ಯಾಗಿದೆ .


ಹಳೆಯ ಕಾಲಕ್ಕೆ ಹೋಲಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ಇಂದು ಅವಕಾಶಗಳು ಹೆಚ್ಚುವೆ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ನಾವು ಸಾಧನೆಯ ಪಥದಲ್ಲಿ ಸಾಗಲು ಸಾಧ್ಯ ಇದನ್ನು ಮನಗಂಡು ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸರ್ಜಿತ ಹೊಸ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿರ್ದೇಶಕರಾದ ಚಂದ್ರಶೇಖರ ರಾಜೇ ಅರಸ್ ರವರು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಹಳೆಯ ತಪ್ಪುಗಳನ್ನು ತಿದ್ದುಕೊಂಡು ಏಕಾಗ್ರತೆಯಿಂದ ಅಭ್ಯಾಸದಲ್ಲಿ ತೊಡಗಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ನಿರ್ದೇಶಕರಾದ ಡಾ. ಎಸ್ ಎನ್ ವೆಂಕಟೇಶ್ ನಾಯಕ್ ರವರು ತಿಳಿಸಿದರು .

ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ಆರೋಗ್ಯವು ಅನಿವಾರ್ಯ ಮತ್ತು ಅವಶ್ಯಕ ಎಂದು ನಿರ್ದೇಶಕ ಯೋಗೀಶ್ ಬೆಡೇಕರ್ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು ಉತ್ತಮ ಕಾಲೇಜಿನಲ್ಲಿ ತರಬೇತಿ ಪಡೆಯುವುದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಮ್ಮನ್ನು ತಯಾರು ಗೊಳಿಸುವ ಉತ್ತಮ ವೇದಿಕೆ ಎಂದು ನಿರ್ದೇಶಕ ಶರತ್ ಗೋರೆ ಅವರು ತಿಳಿಸಿದರು. ತರಬೇತಿಯ ಜೊತೆ ಜೊತೆಗೆ ಹಲವಾರು ಪರೀಕ್ಷೆಗಳನ್ನು ಬರೆದಾಗ ನಮ್ಮಲ್ಲಿ ಆತ್ಮವಿಶ್ವಾಸ ದ್ವಿಗುಣಗೊಳ್ಳಲು ಸಾಧ್ಯವೆಂದು ನಿರ್ದೇಶಕ ಎಸ್ಎಂ ಭಾಷಾ ರವರು ನುಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಸುಭಾಷ್ ಝಾ ರವರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು, ನೀಟ್ ಲಾಂಗ್ ಟರ್ಮ್ ನ ಸಹಾಯಕ ಆಡಳಿತ ಅಧಿಕಾರಿ ವಿಜಯ್ ಕುಮಾರ್ ತೋನಶ್ಯಾಳ ಸ್ವಾಗತಿಸಿ, ನವೀನ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!