April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

ಮೂಡುಬಿದಿರೆ: ಕಲ್ಲಬೆಟ್ಟುವಿನ ನ್ಯೂ ವೈಬ್ರೆಂಟ್ ಕಾಲೇಜಿನ ಆವರಣದಲ್ಲಿ ನೀಟ್ ಲಾಂಗ್ ಟರ್ಮ್ ಡೇ 2025 ನಡೆಯಿತು.


ನ್ಯೂ ವೈಬ್ರೆಂಟ್ ಪಿ ಯು ಕಾಲೇಜು ತನ್ನ ಶೈಕ್ಷಣಿಕ ಸಾಧನೆಯೊಂದಿಗೆ ಉತ್ತಮ ಫಲಿತಾಂಶದೊಂದಿಗೆ ಹೆಸರುವಾಸಿಯಾಗುದರ ಜೊತೆಗೆ ಇದೀಗ ವಿನೂತನ ಕಾರ್ಯಕ್ರಮದ ಮೂಲಕ ಮಾದರಿ ಯಾಗಿದೆ .


ಹಳೆಯ ಕಾಲಕ್ಕೆ ಹೋಲಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ಇಂದು ಅವಕಾಶಗಳು ಹೆಚ್ಚುವೆ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ನಾವು ಸಾಧನೆಯ ಪಥದಲ್ಲಿ ಸಾಗಲು ಸಾಧ್ಯ ಇದನ್ನು ಮನಗಂಡು ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸರ್ಜಿತ ಹೊಸ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿರ್ದೇಶಕರಾದ ಚಂದ್ರಶೇಖರ ರಾಜೇ ಅರಸ್ ರವರು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಹಳೆಯ ತಪ್ಪುಗಳನ್ನು ತಿದ್ದುಕೊಂಡು ಏಕಾಗ್ರತೆಯಿಂದ ಅಭ್ಯಾಸದಲ್ಲಿ ತೊಡಗಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ನಿರ್ದೇಶಕರಾದ ಡಾ. ಎಸ್ ಎನ್ ವೆಂಕಟೇಶ್ ನಾಯಕ್ ರವರು ತಿಳಿಸಿದರು .

ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ಆರೋಗ್ಯವು ಅನಿವಾರ್ಯ ಮತ್ತು ಅವಶ್ಯಕ ಎಂದು ನಿರ್ದೇಶಕ ಯೋಗೀಶ್ ಬೆಡೇಕರ್ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು ಉತ್ತಮ ಕಾಲೇಜಿನಲ್ಲಿ ತರಬೇತಿ ಪಡೆಯುವುದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಮ್ಮನ್ನು ತಯಾರು ಗೊಳಿಸುವ ಉತ್ತಮ ವೇದಿಕೆ ಎಂದು ನಿರ್ದೇಶಕ ಶರತ್ ಗೋರೆ ಅವರು ತಿಳಿಸಿದರು. ತರಬೇತಿಯ ಜೊತೆ ಜೊತೆಗೆ ಹಲವಾರು ಪರೀಕ್ಷೆಗಳನ್ನು ಬರೆದಾಗ ನಮ್ಮಲ್ಲಿ ಆತ್ಮವಿಶ್ವಾಸ ದ್ವಿಗುಣಗೊಳ್ಳಲು ಸಾಧ್ಯವೆಂದು ನಿರ್ದೇಶಕ ಎಸ್ಎಂ ಭಾಷಾ ರವರು ನುಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಸುಭಾಷ್ ಝಾ ರವರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು, ನೀಟ್ ಲಾಂಗ್ ಟರ್ಮ್ ನ ಸಹಾಯಕ ಆಡಳಿತ ಅಧಿಕಾರಿ ವಿಜಯ್ ಕುಮಾರ್ ತೋನಶ್ಯಾಳ ಸ್ವಾಗತಿಸಿ, ನವೀನ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!