27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

ಮೂಡುಬಿದಿರೆ: ಕಲ್ಲಬೆಟ್ಟುವಿನ ನ್ಯೂ ವೈಬ್ರೆಂಟ್ ಕಾಲೇಜಿನ ಆವರಣದಲ್ಲಿ ನೀಟ್ ಲಾಂಗ್ ಟರ್ಮ್ ಡೇ 2025 ನಡೆಯಿತು.


ನ್ಯೂ ವೈಬ್ರೆಂಟ್ ಪಿ ಯು ಕಾಲೇಜು ತನ್ನ ಶೈಕ್ಷಣಿಕ ಸಾಧನೆಯೊಂದಿಗೆ ಉತ್ತಮ ಫಲಿತಾಂಶದೊಂದಿಗೆ ಹೆಸರುವಾಸಿಯಾಗುದರ ಜೊತೆಗೆ ಇದೀಗ ವಿನೂತನ ಕಾರ್ಯಕ್ರಮದ ಮೂಲಕ ಮಾದರಿ ಯಾಗಿದೆ .


ಹಳೆಯ ಕಾಲಕ್ಕೆ ಹೋಲಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ಇಂದು ಅವಕಾಶಗಳು ಹೆಚ್ಚುವೆ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ನಾವು ಸಾಧನೆಯ ಪಥದಲ್ಲಿ ಸಾಗಲು ಸಾಧ್ಯ ಇದನ್ನು ಮನಗಂಡು ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸರ್ಜಿತ ಹೊಸ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿರ್ದೇಶಕರಾದ ಚಂದ್ರಶೇಖರ ರಾಜೇ ಅರಸ್ ರವರು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಹಳೆಯ ತಪ್ಪುಗಳನ್ನು ತಿದ್ದುಕೊಂಡು ಏಕಾಗ್ರತೆಯಿಂದ ಅಭ್ಯಾಸದಲ್ಲಿ ತೊಡಗಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ನಿರ್ದೇಶಕರಾದ ಡಾ. ಎಸ್ ಎನ್ ವೆಂಕಟೇಶ್ ನಾಯಕ್ ರವರು ತಿಳಿಸಿದರು .

ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ಆರೋಗ್ಯವು ಅನಿವಾರ್ಯ ಮತ್ತು ಅವಶ್ಯಕ ಎಂದು ನಿರ್ದೇಶಕ ಯೋಗೀಶ್ ಬೆಡೇಕರ್ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು ಉತ್ತಮ ಕಾಲೇಜಿನಲ್ಲಿ ತರಬೇತಿ ಪಡೆಯುವುದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಮ್ಮನ್ನು ತಯಾರು ಗೊಳಿಸುವ ಉತ್ತಮ ವೇದಿಕೆ ಎಂದು ನಿರ್ದೇಶಕ ಶರತ್ ಗೋರೆ ಅವರು ತಿಳಿಸಿದರು. ತರಬೇತಿಯ ಜೊತೆ ಜೊತೆಗೆ ಹಲವಾರು ಪರೀಕ್ಷೆಗಳನ್ನು ಬರೆದಾಗ ನಮ್ಮಲ್ಲಿ ಆತ್ಮವಿಶ್ವಾಸ ದ್ವಿಗುಣಗೊಳ್ಳಲು ಸಾಧ್ಯವೆಂದು ನಿರ್ದೇಶಕ ಎಸ್ಎಂ ಭಾಷಾ ರವರು ನುಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಸುಭಾಷ್ ಝಾ ರವರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು, ನೀಟ್ ಲಾಂಗ್ ಟರ್ಮ್ ನ ಸಹಾಯಕ ಆಡಳಿತ ಅಧಿಕಾರಿ ವಿಜಯ್ ಕುಮಾರ್ ತೋನಶ್ಯಾಳ ಸ್ವಾಗತಿಸಿ, ನವೀನ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya
error: Content is protected !!