23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

ಬೆಳ್ತಂಗಡಿ: ಎ.25 ರಿಂದ ಮೇ 3 ರವರೆಗೆ ತೆಕ್ಕಾರು ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕು ಮಟ್ಟದಿಂದ ಹೊರ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನ ಸಭೆಯನ್ನು ನಡೆಸಲಾಯಿತು.

ಈ ವೇಳೆ ತಾಲೂಕಿನ ಪ್ರತಿ ಗ್ರಾಮದಿಂದ ಹೊರೆ ಕಾಣಿಕೆ ತೆಗೆದುಕೊಂಡು ಬರುವುವಂತೆ ವಿನಂತಿಸಲಾಯಿತು. ಎ.27 ರಂದು ಬೆಳಿಗ್ಗೆ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನ ಹಾಗೂ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಏಕಕಾಲದಲ್ಲಿ ಹೊರೆ ಕಾಣಿಕೆ ಉದ್ಘಾಟನೆಗೊಳ್ಳಲಿದ್ದು ಪ್ರತಿ ಗ್ರಾಮದ ಭಕ್ತರು ಹೊರೆಕಾಣಿಕೆ ಸಮರ್ಪಿಸಬೇಕೆಂದು ಹಾಗೂ ಎ. 30 ರಂದು ಪ್ರತಿಷ್ಠಾ ದಿವಸದಂದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಬರಬೇಕೆಂದು ವಿನಂತಿಸಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಸಂಚಾಲಕ ಹರೀಶ್ ಪೂಂಜ ಹಾಗೂ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಹಾಗೂ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ನವೀನ್ ನೆರಿಯ ಹಾಗೂ ತಾಲೂಕಿನ ಎಲ್ಲಾ ಧಾರ್ಮಿಕ ಮುಖಂಡರುಗಳು ಉಪಸ್ಥಿತರಿದ್ದರು.

Related posts

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya
error: Content is protected !!