32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

ಬೆಳ್ತಂಗಡಿ: ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪ್ ನಿಧನದಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ಧರ್ಮಪ್ರಾಂತ್ಯಕ್ಕೆ ಸಂಬಂಧಪಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು ಘೋಷಿಸಲಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿ, ಸಂತ ಲಾರೆನ್ಸರ ಕ್ಯಾಥಿಡ್ರಲ್ ದೇವಾಲಯದಲ್ಲಿ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ರವರು ವಿಶೇಷ ಪೂಜೆ ಸಲ್ಲಿಸಿ ಪೋಪ್ ರಿಗಾಗಿ ಪ್ರಾರ್ಥನೆ ಮಾಡಿದರು. ಧರ್ಮಕ್ಷೇತ್ರದ ಬಿಷಪ್ ಹೌಸ್ ಮತ್ತು ಪಾಲನಾ ಕೇಂದ್ರದ ಎಲ್ಲ ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗು ವಿಶ್ವಾಸಿಗಳು ಹಾಜರಿದ್ದರು.

ವಿಶೇಷ ಪೂಜೆಯ ಸಂದೇಶದ ಸಮಯದಲ್ಲಿ ಪರಮ ಪೂಜ್ಯರು ಪೋಪೆರನ್ನು ಭೇಟಿಮಾಡಿದ ಸವಿನೆನಪುಗಳನ್ನು ಹಂಚಿಕ್ಕೊಳ್ಳುತ್ತಾ, “ಪೋಪರಿಗೆ ಭಾರತದ ಕ್ರಿಶ್ಚಿಯನ್ನರ ಕುರಿತು ವಿಶೇಷ ಕಾಳಜಿ ಇತ್ತು, ಅದರಲ್ಲೂ ಬೆಳ್ತಂಗಡಿ ಧರ್ಮಕ್ಷೇತ್ರದ ಎಲ್ಲಾ ಚಟುವಟಿಕೆಗಳ ಕುರಿತು ಕೇಳಿತಿಳಿಯುತ್ತಿದ್ದರು” ಎಂದು ನುಡಿದರು. ಪೋಪ್ ಫ್ರಾನ್ಸಿಸ್ ರವ ಅಸಾನಿಧ್ಯವು ಧರ್ಮಸಭೆಯಲ್ಲೂ ಇಡೀ ಜಗತ್ತಿನಲ್ಲೂ ತುಂಬಲಾಗದ ನಷ್ಟಭರಿಸಲಾಗಿದೆ. ಪೋಪ್ ಫ್ರಾನ್ಸಿಸ್ ರವರ ಶಾಂತಿಯ ಮತ್ತು ಕರುಣೆಯ ಸಂದೇಶವು ಜಗಕೆ ಸಮಾಧಾನವನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಪರಮ ಪೂಜ್ಯ ಲಾರೆನ್ಸರವರು ಸಂತಾಪ ಸೂಚಿಸಿದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya
error: Content is protected !!