September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೊಳಿಸಲು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯರು ಆಗ್ರಹಿಸಿದ್ದಾರೆ.

ಹಲವು ವರ್ಷಗಳಿಂದ ಈ ರಸ್ತೆಗಳ ಅಭಿವೃದ್ಧಿಗೆ ಬೇಡಿಕೆ ನೀಡುತ್ತಾ ಬಂದಿದ್ದು ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ತೆಕ್ಕಾರು ಗ್ರಾಮದಲ್ಲಿ ನೂರಾರು ವರ್ಷದ ಹಿಂದಿನ ದೇವಾಲಯ ಪುನರುತ್ಥಾನಗೊಂಡು ಉತ್ಸವಕ್ಕೆ ತಯಾರಿಯಾಗಿದೆ. ಗೋಪಾಲಕೃಷ್ಣ ದೇವರ ಬ್ರಹ್ಮಕಲಶದ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವ ನೀರಿಕ್ಷೆಯಿದೆ. ಈ ಎಲ್ಲಾ ಅಂಶಗಳನ್ನು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆಗೆ ಗಮನಹರಿಸಬೇಕು. ಬಾಜಾರು-ಜೋಡುಕಟ್ಟೆ 750 ಮೀಟರ್, ಕೊಡಿಬೆಟ್ಟು-ದೇವರಗುಡ್ಡೆ 350 ಮೀ., ದೇವರಗುಡ್ಡೆ-ತೆಕ್ಕಾರು ಸುಮಾರು 2 ಕೀ.ಮೀ. ಉದ್ದದ ರಸ್ತೆಗೆ ಪಿಎಂಜಿ ಯೋಜನೆ ಮೂಲಕ ಡಾಮರೀಕರಣ ಮಾಡಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವಿಲ್ಲ, ಶೀಘ್ರವಾಗಿ ರಸ್ತೆ ಅಭಿವೃದ್ಧಿಗೊಳಿಸಬೇಕು ಎಂದು ಸದಸ್ಯರು ಆಗ್ರಹಿಸಿದ್ದಾರೆ.

Related posts

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya

ನಾಲ್ಕೂರು: ಪುಣ್ಕೆದೊಟ್ಟು ನಾಗಬನದಲ್ಲಿ ಸಂಭ್ರಮದ ನಾಗರ ಪಂಚಮಿ

Suddi Udaya

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya
error: Content is protected !!