37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯುವಕರ ವಿರುದ್ದ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈ ಕೋರ್ಟ್ ಜಾಮೀನು ನೀಡಿದೆ.ಘಟನೆ ಆಧರಿಸಿ ಬೆಳ್ತಂಗಡಿ ಪೋಲಿಸರು ಮೂವರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ, ಕಲಂ 109,351(2) ಜೊತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಇದೀಗ ಮೊದಲ ಆರೋಪಿ, ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಸದ್ರಿ ಪ್ರಕರಣ ಕಳೆದ ಫೆಬ್ರವರಿ 5 ರಂದು ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ.

ಎ.21ರಂದು ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿತು.ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕರ್ ವಾದವನ್ನು ಮಂಡಿಸಿದ್ದಾರೆ.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya
error: Content is protected !!