22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಹಣದ ವಿಚಾರದಲ್ಲಿ ಯುವಕರ ವಿರುದ್ದ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳಿಗೆ ಕರ್ನಾಟಕ ಹೈ ಕೋರ್ಟ್ ಜಾಮೀನು ನೀಡಿದೆ.ಘಟನೆ ಆಧರಿಸಿ ಬೆಳ್ತಂಗಡಿ ಪೋಲಿಸರು ಮೂವರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ, ಕಲಂ 109,351(2) ಜೊತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು.

ಇದೀಗ ಮೊದಲ ಆರೋಪಿ, ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಎಂಬವರಿಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಸದ್ರಿ ಪ್ರಕರಣ ಕಳೆದ ಫೆಬ್ರವರಿ 5 ರಂದು ಮಾಚಾರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇನ್ನೋರ್ವ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುತ್ತಾನೆ.

ಎ.21ರಂದು ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಇದ್ದ ಪೀಠವು ಈ ಜಾಮೀನು ಮಂಜೂರು ಮಾಡಿತು.ಆರೋಪಿಗಳ ಪರ ಹೈಕೋರ್ಟ್ ವಕೀಲರುಗಳಾದ ಮುಸ್ತಫಾ ಬೆಳ್ತಂಗಡಿ, ಅನ್ವರ್ ಕೆ.ಪಿ ಕುಪ್ಪೆಟ್ಟಿ ಮತ್ತು ಮೋನಿಸ್ ಸಾಹುಕರ್ ವಾದವನ್ನು ಮಂಡಿಸಿದ್ದಾರೆ.

Related posts

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
error: Content is protected !!