25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮಹಮ್ಮದ್ ಅವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya
error: Content is protected !!