26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮಹಮ್ಮದ್ ಅವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!