July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮಹಮ್ಮದ್ ಅವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya
error: Content is protected !!