ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮಹಮ್ಮದ್ ಅವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!