September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಲಕ್ಷಾಂತರ ಹಣ ದುರುಪಯೋಗ ಮಾಡಿರುವುದು ಬೆಳಕಿಗೆ ಬಂದಿದ್ದು, ಇದರ ಬಗ್ಗೆ ಇಲಾಖೆಯ ವತಿಯಿಂದ ತನಿಖೆ ಆರಂಭಗೊಂಡಿದೆ.

ಸಂಘದ ಇಬ್ಬರು ಸಿಬ್ಬಂದಿಗಳು ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು, ವರ್ಷದ ಆಡಿಟ್ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆನ್ನಲಾಗಿದೆ.


ಸಂಘದ ಮ್ಯಾನೇಜರ್ ನಾರಾಯಣ ಗೌಡರಿಗೆ ಸಿಬ್ಬಂದಿಗಳು ಮಾಡಿರುವ ಈ ಅವ್ಯವಹಾರದ ಯಾವುದೇ ಮಾಹಿತಿ ಇರಲಿಲ್ಲ. ವಾರ್ಷಿಕ ಲೆಕ್ಕ ಪತ್ರ ಪರಿಶೋಧನೆಯಲ್ಲಿ ಅಧ್ಯಕ್ಷ ಹೆಚ್. ಪದ್ಮ ಗೌಡರಿಗೆ ಹಣ ದುರುಪಯೋಗ ಪಡಿಸಿರುವ ಪ್ರಕರಣ ಗೊತ್ತಾಗಿದ್ದು, ಆಂತರಿಕ ತನಿಖೆ ನಡೆಸಿದಾಗ ಸಂಘದ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ಸದಾಶಿವ @ ಸುಜಿತ್ ಎಂಬ ಇಬ್ಬರು ಸೇರಿಕೊಂಡು ಹಣ ದುರುಪಯೋಗ ಮಾಡಿರುವ ಆರೋಪಕ್ಕೆ ಒಳಗಾಗಿದ್ದು, ಅವರು ಇದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಇದರಲ್ಲಿ ಅರ್ಧದಷ್ಟು ಹಣವನ್ನು ಸಂಘಕ್ಕೆ ವಾಪಾಸು ಕಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.


ತನಿಖೆ ನಡೆಯುತ್ತಿದೆ: ಹೆಚ್.ಪದ್ಮಗೌಡ
ಪ್ರಕರಣದ ಬಗ್ಗೆ ಸಂಘದ ಅಧ್ಯಕ್ಷ ಹೆಚ್. ಪದ್ಮಗೌಡ ಅವರನ್ನು ‘ಸುದ್ದಿ ಉದಯ’ ಕರೆ ಮಾಡಿ ಸಂಪರ್ಕಿಸಿದಾಗ, ಮಾಹಿತಿ ನೀಡಿದ ಅಧ್ಯಕ್ಷರು ಸಂಘದಲ್ಲಿ ನಿರ್ದಿಷ್ಟವಾಗಿ ಎಷ್ಟು ಹಣ ಅವ್ಯವಹಾರವಾಗಿದೆ ಎಂದು ಗೊತ್ತಾಗಿಲ್ಲ, ಇದರ ತನಿಖೆ ನಡೆಯುತ್ತಿದ್ದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಬ್ಬರ್ ವ್ಯವಹಾರದಲ್ಲಿ ವ್ಯತ್ಯಾಸವಾಗಿರುವುದು ಕಂಡು ಬಂದಿದೆ. ಇಬ್ಬರು ಸಿಬ್ಬಂದಿಗಳು ಹಣ ದುರುಪಯೋಗ ಮಾಡಿದ್ದು, ಇದನ್ನು ಒಪ್ಪಿಕೊಂಡಿದ್ದಾರೆ ಕೂಡಲೇ ನಷ್ಟ ಭರ್ತಿ ಮಾಡುತ್ತೇವೆ ಎಂದು ಸ್ವಷ್ಟಪಡಿಸಿದ್ದಾರೆ.

Related posts

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya
error: Content is protected !!