22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಲಕ್ಷಾಂತರ ಹಣ ದುರುಪಯೋಗ ಮಾಡಿರುವುದು ಬೆಳಕಿಗೆ ಬಂದಿದ್ದು, ಇದರ ಬಗ್ಗೆ ಇಲಾಖೆಯ ವತಿಯಿಂದ ತನಿಖೆ ಆರಂಭಗೊಂಡಿದೆ.

ಸಂಘದ ಇಬ್ಬರು ಸಿಬ್ಬಂದಿಗಳು ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು, ವರ್ಷದ ಆಡಿಟ್ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆನ್ನಲಾಗಿದೆ.


ಸಂಘದ ಮ್ಯಾನೇಜರ್ ನಾರಾಯಣ ಗೌಡರಿಗೆ ಸಿಬ್ಬಂದಿಗಳು ಮಾಡಿರುವ ಈ ಅವ್ಯವಹಾರದ ಯಾವುದೇ ಮಾಹಿತಿ ಇರಲಿಲ್ಲ. ವಾರ್ಷಿಕ ಲೆಕ್ಕ ಪತ್ರ ಪರಿಶೋಧನೆಯಲ್ಲಿ ಅಧ್ಯಕ್ಷ ಹೆಚ್. ಪದ್ಮ ಗೌಡರಿಗೆ ಹಣ ದುರುಪಯೋಗ ಪಡಿಸಿರುವ ಪ್ರಕರಣ ಗೊತ್ತಾಗಿದ್ದು, ಆಂತರಿಕ ತನಿಖೆ ನಡೆಸಿದಾಗ ಸಂಘದ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ಸದಾಶಿವ @ ಸುಜಿತ್ ಎಂಬ ಇಬ್ಬರು ಸೇರಿಕೊಂಡು ಹಣ ದುರುಪಯೋಗ ಮಾಡಿರುವ ಆರೋಪಕ್ಕೆ ಒಳಗಾಗಿದ್ದು, ಅವರು ಇದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಇದರಲ್ಲಿ ಅರ್ಧದಷ್ಟು ಹಣವನ್ನು ಸಂಘಕ್ಕೆ ವಾಪಾಸು ಕಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.


ತನಿಖೆ ನಡೆಯುತ್ತಿದೆ: ಹೆಚ್.ಪದ್ಮಗೌಡ
ಪ್ರಕರಣದ ಬಗ್ಗೆ ಸಂಘದ ಅಧ್ಯಕ್ಷ ಹೆಚ್. ಪದ್ಮಗೌಡ ಅವರನ್ನು ‘ಸುದ್ದಿ ಉದಯ’ ಕರೆ ಮಾಡಿ ಸಂಪರ್ಕಿಸಿದಾಗ, ಮಾಹಿತಿ ನೀಡಿದ ಅಧ್ಯಕ್ಷರು ಸಂಘದಲ್ಲಿ ನಿರ್ದಿಷ್ಟವಾಗಿ ಎಷ್ಟು ಹಣ ಅವ್ಯವಹಾರವಾಗಿದೆ ಎಂದು ಗೊತ್ತಾಗಿಲ್ಲ, ಇದರ ತನಿಖೆ ನಡೆಯುತ್ತಿದ್ದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಬ್ಬರ್ ವ್ಯವಹಾರದಲ್ಲಿ ವ್ಯತ್ಯಾಸವಾಗಿರುವುದು ಕಂಡು ಬಂದಿದೆ. ಇಬ್ಬರು ಸಿಬ್ಬಂದಿಗಳು ಹಣ ದುರುಪಯೋಗ ಮಾಡಿದ್ದು, ಇದನ್ನು ಒಪ್ಪಿಕೊಂಡಿದ್ದಾರೆ ಕೂಡಲೇ ನಷ್ಟ ಭರ್ತಿ ಮಾಡುತ್ತೇವೆ ಎಂದು ಸ್ವಷ್ಟಪಡಿಸಿದ್ದಾರೆ.

Related posts

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya
error: Content is protected !!