26.5 C
ಪುತ್ತೂರು, ಬೆಳ್ತಂಗಡಿ
April 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್


ಬೆಳ್ತಂಗಡಿ: ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದೆಯ ನೆಲೆಬೀಡಾದ ಜಮ್ಮು-ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ ಕ್ರಮದ ಪರಿಣಾಮ ಜಮ್ಮು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದಿರೋದರಿಂದ ಉಗ್ರರು ಅತೀವ ಹತಾಶೆಗೊಂಡಿದ್ದು ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದ್ದಾರೆ.


ಈ ಹೇಡಿತನದ ಉಗ್ರರ ದಾಳಿಗೆ ಬಲಿಯಾಗಿರುವವರ ಸಾವು ಅತ್ಯಂತ ನೋವು ತಂದಿದೆ. ಮೃತರ ಕುಟುಂಬಗಳಿಗೆ ಈ ದಾರುಣ ಘಟನೆಯ ಆಘಾತ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮುಂದಿನ ದಿನಗಳಲ್ಲಿ ಇಂತಹ ಹತಾಶ ಉಗ್ರರ ರಣಹೇಡಿ ಕೃತ್ಯಗಳು ಮರುಕಳಿಸದಂತೆ ಕೇಂದ್ರ ಸರ್ಕಾರದಿಂದ ಉಗ್ರರಿಗೆ ಸಂದೇಶ ರವಾನೆಯಾಗಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!