23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್


ಬೆಳ್ತಂಗಡಿ: ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದೆಯ ನೆಲೆಬೀಡಾದ ಜಮ್ಮು-ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ ಕ್ರಮದ ಪರಿಣಾಮ ಜಮ್ಮು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದಿರೋದರಿಂದ ಉಗ್ರರು ಅತೀವ ಹತಾಶೆಗೊಂಡಿದ್ದು ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದ್ದಾರೆ.


ಈ ಹೇಡಿತನದ ಉಗ್ರರ ದಾಳಿಗೆ ಬಲಿಯಾಗಿರುವವರ ಸಾವು ಅತ್ಯಂತ ನೋವು ತಂದಿದೆ. ಮೃತರ ಕುಟುಂಬಗಳಿಗೆ ಈ ದಾರುಣ ಘಟನೆಯ ಆಘಾತ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮುಂದಿನ ದಿನಗಳಲ್ಲಿ ಇಂತಹ ಹತಾಶ ಉಗ್ರರ ರಣಹೇಡಿ ಕೃತ್ಯಗಳು ಮರುಕಳಿಸದಂತೆ ಕೇಂದ್ರ ಸರ್ಕಾರದಿಂದ ಉಗ್ರರಿಗೆ ಸಂದೇಶ ರವಾನೆಯಾಗಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya
error: Content is protected !!