September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್


ಬೆಳ್ತಂಗಡಿ: ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದೆಯ ನೆಲೆಬೀಡಾದ ಜಮ್ಮು-ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ ಕ್ರಮದ ಪರಿಣಾಮ ಜಮ್ಮು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದಿರೋದರಿಂದ ಉಗ್ರರು ಅತೀವ ಹತಾಶೆಗೊಂಡಿದ್ದು ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದ್ದಾರೆ.


ಈ ಹೇಡಿತನದ ಉಗ್ರರ ದಾಳಿಗೆ ಬಲಿಯಾಗಿರುವವರ ಸಾವು ಅತ್ಯಂತ ನೋವು ತಂದಿದೆ. ಮೃತರ ಕುಟುಂಬಗಳಿಗೆ ಈ ದಾರುಣ ಘಟನೆಯ ಆಘಾತ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮುಂದಿನ ದಿನಗಳಲ್ಲಿ ಇಂತಹ ಹತಾಶ ಉಗ್ರರ ರಣಹೇಡಿ ಕೃತ್ಯಗಳು ಮರುಕಳಿಸದಂತೆ ಕೇಂದ್ರ ಸರ್ಕಾರದಿಂದ ಉಗ್ರರಿಗೆ ಸಂದೇಶ ರವಾನೆಯಾಗಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಲಾಯಿಲ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ತೆರವಿಗೆ ತಹಶೀಲ್ದಾರ್ ಆದೇಶ; ಕಟ್ಟಡಕ್ಕೆ ನೋಟೀಸ್ ಅಂಟಿಸಿದ ಅಧಿಕಾರಿಗಳು

Suddi Udaya

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya
error: Content is protected !!