ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ.

ಇನ್ನೊಂದು ತೆಂಗಿನ ಮರ ಬಿದ್ದು ಬಚ್ಚಲು ಕೊಟ್ಟಿಗೆ ಸಂಪೂರ್ಣ ನಾಶವಾಗಿತ್ತದೆ . ಕೂಡಲೇ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಭೇಟಿ ನೀಡಿ ಒಬ್ಬಂಟಿಯಾಗಿರುವ ಆ ಮಹಿಳೆಗೆ ಧೈರ್ಯವನ್ನು ತುಂಬಿರುತ್ತಾರೆ.

ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಭೇಟಿ ನೀಡಿ ಪಂಚಾಯತ್ ನಿಂದ ಸಾಧ್ಯವಾದಷ್ಟು ನೆರವನ್ನು ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹಾಗೂ ಕ್ಲಬ್ ನ ಸದಸ್ಯರುಗಳಾದ ಚಂದ್ರಶೇಖರ ಚಂದ್ರಕಾಂತ್, ಕೇಶವ, ದಿನೇಶ್, ಭರತ್ ,ಸುದರ್ಶನ್ ಪಿಲಂಬು ಉಪಸ್ಥಿತರಿದ್ದರು.