July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ.

ಇನ್ನೊಂದು ತೆಂಗಿನ ಮರ ಬಿದ್ದು ಬಚ್ಚಲು ಕೊಟ್ಟಿಗೆ ಸಂಪೂರ್ಣ ನಾಶವಾಗಿತ್ತದೆ . ಕೂಡಲೇ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಭೇಟಿ ನೀಡಿ ಒಬ್ಬಂಟಿಯಾಗಿರುವ ಆ ಮಹಿಳೆಗೆ ಧೈರ್ಯವನ್ನು ತುಂಬಿರುತ್ತಾರೆ.

ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಭೇಟಿ ನೀಡಿ ಪಂಚಾಯತ್ ನಿಂದ ಸಾಧ್ಯವಾದಷ್ಟು ನೆರವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹಾಗೂ ಕ್ಲಬ್ ನ ಸದಸ್ಯರುಗಳಾದ ಚಂದ್ರಶೇಖರ ಚಂದ್ರಕಾಂತ್, ಕೇಶವ, ದಿನೇಶ್, ಭರತ್ ,ಸುದರ್ಶನ್ ಪಿಲಂಬು ಉಪಸ್ಥಿತರಿದ್ದರು.

Related posts

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya
error: Content is protected !!