23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್


ಬೆಳ್ತಂಗಡಿ: ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದೆಯ ನೆಲೆಬೀಡಾದ ಜಮ್ಮು-ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ ಕ್ರಮದ ಪರಿಣಾಮ ಜಮ್ಮು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದಿರೋದರಿಂದ ಉಗ್ರರು ಅತೀವ ಹತಾಶೆಗೊಂಡಿದ್ದು ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದ್ದಾರೆ.


ಈ ಹೇಡಿತನದ ಉಗ್ರರ ದಾಳಿಗೆ ಬಲಿಯಾಗಿರುವವರ ಸಾವು ಅತ್ಯಂತ ನೋವು ತಂದಿದೆ. ಮೃತರ ಕುಟುಂಬಗಳಿಗೆ ಈ ದಾರುಣ ಘಟನೆಯ ಆಘಾತ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮುಂದಿನ ದಿನಗಳಲ್ಲಿ ಇಂತಹ ಹತಾಶ ಉಗ್ರರ ರಣಹೇಡಿ ಕೃತ್ಯಗಳು ಮರುಕಳಿಸದಂತೆ ಕೇಂದ್ರ ಸರ್ಕಾರದಿಂದ ಉಗ್ರರಿಗೆ ಸಂದೇಶ ರವಾನೆಯಾಗಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya
error: Content is protected !!