22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್


ಬೆಳ್ತಂಗಡಿ: ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದೆಯ ನೆಲೆಬೀಡಾದ ಜಮ್ಮು-ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ ಕ್ರಮದ ಪರಿಣಾಮ ಜಮ್ಮು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದಿರೋದರಿಂದ ಉಗ್ರರು ಅತೀವ ಹತಾಶೆಗೊಂಡಿದ್ದು ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದ್ದಾರೆ.


ಈ ಹೇಡಿತನದ ಉಗ್ರರ ದಾಳಿಗೆ ಬಲಿಯಾಗಿರುವವರ ಸಾವು ಅತ್ಯಂತ ನೋವು ತಂದಿದೆ. ಮೃತರ ಕುಟುಂಬಗಳಿಗೆ ಈ ದಾರುಣ ಘಟನೆಯ ಆಘಾತ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮುಂದಿನ ದಿನಗಳಲ್ಲಿ ಇಂತಹ ಹತಾಶ ಉಗ್ರರ ರಣಹೇಡಿ ಕೃತ್ಯಗಳು ಮರುಕಳಿಸದಂತೆ ಕೇಂದ್ರ ಸರ್ಕಾರದಿಂದ ಉಗ್ರರಿಗೆ ಸಂದೇಶ ರವಾನೆಯಾಗಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya
error: Content is protected !!