31.4 C
ಪುತ್ತೂರು, ಬೆಳ್ತಂಗಡಿ
April 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

ಪುತ್ತೂರು: ಇಂದು ( ಎಪ್ರಿಲ್ 24) ಸಂಜೆ 4 ಗಂಟೆಗೆ ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಅಕ್ಷಯ ತೃತೀಯದ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ . ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ .

ಈ ಕಾರ್ಯಕ್ರಮದಲ್ಲಿ ಕುಂಟಾರು ರವೀಶ್ ತಂತ್ರಿಗಳು , ಪಂಜ ಭಾಸ್ಕರ ಭಟ್ , ವಂದನಾಶಂಕರ್ ಇವರು ತಮ್ಮ ವಿಚಾರಧಾರೆಯನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ಟ ಭಾಗವಹಿಸಲಿರುವರು. ಈ ಸಂವಾದ ಕಾರ್ಯಕ್ರಮವನ್ನು ಡಾ ವಿಜಯ ಸರಸ್ವತಿ ನಡೆಸಿಕೊಡುವವರು.

ಚಿನ್ನದ ಹೂಡಿಕೆ , ಮೌಲ್ಯ ವೃದ್ಧಿ ಹಾಗು ಹಲವು ಧಾರ್ಮಿಕ ಮತ್ತು ವೈಚಾರಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ. ಆಸಕ್ತರು ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಸಂಸ್ಥೆಯ ಚೇರ್ಮನ್ ಕೃಷ್ಣ ಪ್ರಸಾದ್ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya
error: Content is protected !!