23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿ

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

ಬೆಳ್ತಂಗಡಿ: ಮನೆಯಲ್ಲಿ ಜನರು ನಿದ್ರಿಸುತ್ತಿರುವಾಗಲೇ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋದ ಘಟನೆ ತೆಕ್ಕಾರು ಎಂಬಲ್ಲಿ ಎ.23ರಂದು ರಾತ್ರಿ ಸಂಭವಿಸಿದೆ.

ತೆಕ್ಕಾರುವಿನ ಗುತ್ತು ಮನೆ ನಿವಾಸಿ ಮುಸ್ತಫಾ ರವರ ಮನೆಗೆ ಹೊಕ್ಕ ಕಳ್ಳರು ಹಿಂಬದಿ ಬಾಗಿಲಿನಿಂದ ಚಿಲಕ ತೆರೆದು ಮನೆಯೊಳಗೆ ಹೊಕ್ಕಿ ಸುಮಾರು 5 ಪವನ್ ನಷ್ಟು ಚಿನ್ನ ಮೂರು ಸಾವಿರ ರೂ ನಗದುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ.

ಮನೆಯವರ ಹೇಳಿಕೆಯಂತೆ ನಿನ್ನೆ ಸುಮಾರು ಮೂರರಿಂದ ನಾಲ್ಕುಗಂಟೆ ಹೊತ್ತಿಗೆ ಮನೆ ಕಳ್ಳತನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮುಸ್ತಫಾ ರವರ ಮನೆಗೆ ನೆಂಟರು ಬಂದಿದ್ದು ನೆಂಟರಿಷ್ಟರ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಅದೇ ವೇಳೆ ಅವರ ಬ್ಯಾಗ್ ಗಳನ್ನು ಎತ್ತಿಕೊಂಡು ಹೋಗಿದ್ದು ಪಕ್ಕದ ಅಂಗಳದಲ್ಲಿ ದೋಚಿ ಬಿಸಾಕಿ ಹೋಗಿದ್ದಾರೆ.

ಇದೇ ಸಂದರ್ಭದಲ್ಲಿ ತೆಕ್ಕಾರುವಿನ ಕೋಡಿ ನಿವಾಸಿ ಅನ್ವರ್ ಎಂಬವರ ಮನೆಗೂ ಕಳ್ಳರು ನುಗ್ಗಿದ್ದು ಮನೆಯೊಳಗಡೆ ಕಪಾಟ್ ನ ಒಳಗಡೆಯಿದ್ದ ನಗದನ್ನು ದೋಚಿಕೊಂಡಿದ್ದು ಆದರೆ ಆಕಸ್ಮಾತ್ ಅವರ ಜೇಬಿಗೆ ಹಾಕುವ ಹಣವು ಕೆಳಗಡೆ ಬಿದ್ದಿದ್ದು ಬೆಳಿಗ್ಗೆ ಹೊತ್ತು ಮನೆಯ ಯಜಮಾನಿ ನೀರು ಕುಡಿಯಲೆಂದು ಎದ್ದಾಗ ಕಳ್ಳತನ ನಡೆದ ಬಗ್ಗೆ ಅರಿವಾಗಿದೆ. ಮನೆಯ ಹಿಂಬಾಗಿಲು ತೆರೆದ ಸ್ಥಿತಿಯಲ್ಲಿದ್ದು ದೋಚಿದ ಮೂರು ಸಾವಿರ ಹಣ ಅಂಗಳದಲ್ಲಿ ಬಿದ್ದು ಸಿಕ್ಕಿದೆ ಎಂದು ಅನ್ವರ್ ಮನೆಯವರು ತಿಳಿಸಿದ್ದಾರೆ.

ಇದೇ ರೀತಿ ತೆಕ್ಕಾರು ವ್ಯಾಪ್ತಿಯ ಹಲವು ಮನೆಗಳಲ್ಲಿ ಕಳ್ಳತನ ನಡೆದಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ಹೆಚ್ಚಿನ ವಿವರಗಳು ಹೊರ ಬರಬೇಕಿದೆ.

Related posts

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya
error: Content is protected !!