23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

ಬೆಳ್ತಂಗಡಿ: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದ ಮಾತೆಯ ನೆಲೆವೀಡಾದ ಜಮ್ಮು- ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ ಕ್ರಮದ ಪರಿಣಾಮ ಜಮ್ಮು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದಿರೋದರಿಂದ ಉಗ್ರರು ಹತಾಶರಾಗಿ ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹೇಡಿತನದ ಉಗ್ರರ ದಾಳಿಗೆ ಬಲಿಯಾಗಿರುವವರ ಸಾವು ಅತ್ಯಂತ ನೋವು ತಂದಿದೆ. ಮೃತರ ಕುಟುಂಬಗಳಿಗೆ ಈ ದಾರುಣ ಘಟನೆಯ ಆಘಾತ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮುಂದಿನ ದಿನಗಳಲ್ಲಿ ಇಂತಹ ಹತಾಶ ಉಗ್ರರ ರಣಹೇಡಿ ಕೃತ್ಯಗಳು ಮರುಕಳಿಸದಂತೆ ಕೇಂದ್ರ ಸರ್ಕಾರದಿಂದ ಉಗ್ರರಿಗೆ ದಿಟ್ಟ ಸಂದೇಶ ರವಾನೆಯಾಗಲಿ ಹಾಗೆಯೇ ಎಕ್ಸಾಮ್ ಸಂದರ್ಭದಲ್ಲಿ ಜನಿವಾರ ಕಳಚಿದ ಕೃತ್ಯ ನಡೆಸಿದವರಿಗೂ ರಾಜ್ಯ ಸರಕಾರ ದಿಟ್ಟ ಕ್ರಮ ಕೈಗೊಂಡು ಶಿಕ್ಷೆ ನೀಡಬೇಕೆಂದು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಮತ್ತು ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ, ಯುವವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ತಾಜೆ ಹಾಗೂ ಕಾರ್ಯದರ್ಶಿಗಳು ಎಲ್ಲಾ ಪದಾಧಿಕಾರಿಗಳು ಮತ್ತು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya
error: Content is protected !!