26.1 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಜರಗುವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆ ಮತ್ತು ವಾರ್ಷಿಕ ಮೇಷ ಜಾತ್ರಾ ಮಹೋತ್ಸವವು ಏ. 23ದಿಂದ ಮೇ.2ರವರೆಗೆ ಜರಗಲಿದೆ.

ಏ.23ರಂದು ಸೀಯಾಳಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಗಂಟೆ 6.30ರಿಂದ ಧ್ವಜಾರೋಹಣ, ಮಹಾಪೂಜೆ, ಉತ್ಸವ, ವಸಂತ ಸೇವೆ ನಡೆಯಿತು. ಏ. 24 ಮಹಾಪೂಜೆ, ಏಕಾದಶಿ, ರಾತ್ರಿ ಗಂಟೆ 7ರಿಂದ ಮಹಾಪೂಜೆ, ಉತ್ಸವ ನಡೆಯಿತು.

ಏ. 25ರಂದು ಮಧ್ಯಾಹ್ನ ಮಹಾಪೂಜೆ , ಸಾಯಂ. ಗಂಟೆ 4ರಿಂದ ಶ್ರೀ ದೇವಳದಿಂದ ಭಂಡಾರ ಹೊರಟು ಪಿಲಿಚಾಮುಂಡಿ ದೈವದ ನೇಮ, ಸಂಜೆ ಗಂಟೆ 6.30ರಿಂದ ಮಹಾಪೂಜೆ, ಉತ್ಸವ, ಏ. 26ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಸಾಯಂ. ಗಂಟೆ 6ರಿಂದ ಕೊಪ್ಪರಿಗೆ ಏರಿಸುವುದು, ಬಯ್ಯದ ಬಲಿ ಪ್ರಾರಂಭ, ವಸಂತ ಸೇವೆ, ಏ.27ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಗಂಟೆ 7ರಿಂದ ಕೆರೆ ಆಯನ, ಉತ್ಸವ, ಮಹಾಪೂಜೆ. ಏ.28ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಾಯಂ. ಗಂಟೆ 4ರಿಂದ ಉತ್ಸವ, ಮೂಡುಕಟ್ಟೆ ಸವಾರಿ, ವಸಂತ ಸೇವೆ, ಮಹಾಪೂಜೆ. ಏ. 29ರಂದು ಪೂರ್ವಾಹ್ನ ಗಂಟೆ 7ರಿಂದ ಬ್ರಹ್ಮಕಲಶ ದಿನಾಚರಣೆ ಪ್ರಯುಕ್ತ ಗಣಯಾಗ, ಏಕದಶಾರುದ್ರಾಭಿಷೇಕ, ಪವಮಾನಹೋಮ, ಆಶ್ಲೇಷ ಬಲಿ, ಶ್ರೀ ಅನಂತೇಶ್ವರ ಸ್ವಾಮಿಗೆ ವಿಶೇಷ ಕಲಶಾಭಿಷೇಕ, ಶ್ರೀ ಗಣಪತಿ ದೇವರಿಗೆ ಕಟಾಹ ಅಪೂಪ ನೈವೇದ್ಯ ಸಮರ್ಪಣೆ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಸಾಯಂ. ಗಂಟೆ 7ರಿಂದ ಚಂದ್ರಮಂಡಲೋತ್ಸವ ವಸಂತ ಸೇವೆ, ಮಹಾಪೂಜೆ. ಏ. 30ರಂದು ಪೂರ್ವಾಹ್ನ ಗಂಟೆ 7ರಿಂದ ದರ್ಶನ ಬಲಿ ಸಾಯಂ. ಗಂಟೆ 6ರಿಂದ ಮಹಾರಥೋತ್ಸವ, ಮಹಾಪೂಜೆ, ಶ್ರೀಭೂತ ಬಲಿ, ಮೇ 1ಪ್ರಾತಃಕಾಲ ಕವಾಟೋದ್ಘಾಟನೆ, ವಸಂತ ಸೇವೆ ಮಧ್ಯಾಹ್ನ 11ರಿಂದ ತುಲಾಭಾರ ಸೇವೆ, ಮಹಾಪೂಜೆ, ಅನ್ನಸಂತರ್ಪಣೆ, ಸಾಯಂ. ಗಂಟೆ 4ರಿಂದ ಅವಭ್ರತ ರಾತ್ರಿ 8ರಿಂದ ಧ್ವಜಾವರೋಹಣ, ಮಹಾಪೂಜೆ. ಮೇ. 2ರಂದು ಮಹಾಸಂಪ್ರೋಕ್ಷಣೆ, ತುಲಾಭಾರ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

Related posts

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya
error: Content is protected !!