30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ವತಿಯಿಂದ ಪಹಾಲ್ ಗಾಮ್ ಧಾಳಿ ಯ ಬಗ್ಗೆ ಖಂಡನಾ ಸಭೆ ಹಾಗೂ ಶ್ರದ್ಧಾಂಜಲಿ ಸಭೆ ನಡೆಯಿತು.

ಪಹಾಲ್ ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರು ಹಾಗೂ ಅಮಾಯಕರ ಮೇಲೆ ನಡೆಸಿದ ದಾಳಿ ಬಗ್ಗೆ ವಕೀಲರ ಸಂಘವು ಸಭೆಯನ್ನು ನಡಿಸಿ ಅತ್ಯುಗ್ರವಾಗಿ ಖಂಡಿಸಿದೆ. ಸಭೆಯಲ್ಲಿ ಹಿರಿಯ ವಕೀಲರಾದ ಸುಬ್ರಮಣ್ಯ ಕುಮಾರ್ ಅಗರ್ತ ಮಾತನಾಡುತ್ತ ಈ ತರಹದ ಕೃತ್ಯಗಳು ನಡೆದಾಗ ನಾವೆಲ್ಲರು ಜಾತಿ, ಧರ್ಮ, ಪಕ್ಷ ಹಾಗೂ ಮನಸ್ತಾಪಗಳನ್ನು ಮರೆತು ಒಗ್ಗಟ್ಟಾಗಿ ಖಂಡಿಸಿ ನಾವು ಸರಕಾರದ ಜೊತೆ ದೇಶದ ಜೊತೆ ನಿಲ್ಲಬೇಕು ಎಂದು ತಮ್ಮ ಮಾತಲ್ಲಿ ತಿಳಿಸಿದರು. ಹಿರಿಯ ವಕೀಲರಾದ ಶಿವಕುಮಾರ್ ಎಸ್ ಎಂ ಮಾತನಾಡುತ್ತ ಇದು ನಮ್ಮ ದೇಶದ ಮೇಲೆ ಆಗಿರುವ ದಾಳಿಯಾಗಿದೆ. ಪ್ರವಾಸೋದ್ಯಮ ಉತ್ತುಂಗಲ್ಲಿರುವಾಗ ಅದನ್ನು ಸಹಿಸದೆ ಈ ಕೃತ್ಯ ಎಸಗಲಾಗಿದೆ. ನಾವು ಎಲ್ಲರೂ ಒಂದಾಗಿ ಇದನ್ನು ಖಂಡಿಸ ಬೇಕಾಗಿದೆ ಎಂದರು.ಅಧ್ಯಕ್ಷರಾದ ವಸಂತ ಮರಕಡ ಈ ಕೃತ್ಯವನ್ನು ಖಂಡಿಸುತ್ತಾ ಈ ದಾಳಿಯು ನಮ್ಮ ದೇಶದ ಮೇಲೆ ಹೇಡಿಗಳು ಮಾಡಿರುವ ದಾಳಿಯಾಗಿದೆ, ಇದರ ಬಗ್ಗೆ ವಾಟ್ಸಪ್ಪ್, ಫೇಸ್ಬುಕ್ ಗಳಲ್ಲಿ ದಾಳಿಕೊರರರು ಮಾಡಿರುವ ಕೃತ್ಯವನ್ನು ಸಮರ್ಥಿಸುವವರನ್ನು ಸಮಾಜ ಬಹಿಷ್ಕರಿಸಬೇಕು, ಖಂಡಿಸ್ಬೇಕು ಅವರೆಲ್ಲರೂ ದೇಶದ್ರೋಹಿಗಳು ಎಂದು ಹೇಳಿದರು.

ವೇದಿಕೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾದ ಅಶೋಕ್ ಕರಿಯನೆಲ ಉಪಸ್ಥಿತರಿದ್ದರು. ಪ್ರಾಸ್ತಾವಿಕವಾಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ಮಾತನಾಡಿದರು.

ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಸರಕಾರಿ ವಕೀಲರುಗಳು ಹಾಜರಿದ್ದರು.

Related posts

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya
error: Content is protected !!