September 6, 2026
Uncategorized

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ವತಿಯಿಂದ ಪಹಾಲ್ ಗಾಮ್ ಧಾಳಿ ಯ ಬಗ್ಗೆ ಖಂಡನಾ ಸಭೆ ಹಾಗೂ ಶ್ರದ್ಧಾಂಜಲಿ ಸಭೆ ನಡೆಯಿತು.

ಪಹಾಲ್ ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರು ಹಾಗೂ ಅಮಾಯಕರ ಮೇಲೆ ನಡೆಸಿದ ದಾಳಿ ಬಗ್ಗೆ ವಕೀಲರ ಸಂಘವು ಸಭೆಯನ್ನು ನಡಿಸಿ ಅತ್ಯುಗ್ರವಾಗಿ ಖಂಡಿಸಿದೆ. ಸಭೆಯಲ್ಲಿ ಹಿರಿಯ ವಕೀಲರಾದ ಸುಬ್ರಮಣ್ಯ ಕುಮಾರ್ ಅಗರ್ತ ಮಾತನಾಡುತ್ತ ಈ ತರಹದ ಕೃತ್ಯಗಳು ನಡೆದಾಗ ನಾವೆಲ್ಲರು ಜಾತಿ, ಧರ್ಮ, ಪಕ್ಷ ಹಾಗೂ ಮನಸ್ತಾಪಗಳನ್ನು ಮರೆತು ಒಗ್ಗಟ್ಟಾಗಿ ಖಂಡಿಸಿ ನಾವು ಸರಕಾರದ ಜೊತೆ ದೇಶದ ಜೊತೆ ನಿಲ್ಲಬೇಕು ಎಂದು ತಮ್ಮ ಮಾತಲ್ಲಿ ತಿಳಿಸಿದರು. ಹಿರಿಯ ವಕೀಲರಾದ ಶಿವಕುಮಾರ್ ಎಸ್ ಎಂ ಮಾತನಾಡುತ್ತ ಇದು ನಮ್ಮ ದೇಶದ ಮೇಲೆ ಆಗಿರುವ ದಾಳಿಯಾಗಿದೆ. ಪ್ರವಾಸೋದ್ಯಮ ಉತ್ತುಂಗಲ್ಲಿರುವಾಗ ಅದನ್ನು ಸಹಿಸದೆ ಈ ಕೃತ್ಯ ಎಸಗಲಾಗಿದೆ. ನಾವು ಎಲ್ಲರೂ ಒಂದಾಗಿ ಇದನ್ನು ಖಂಡಿಸ ಬೇಕಾಗಿದೆ ಎಂದರು.ಅಧ್ಯಕ್ಷರಾದ ವಸಂತ ಮರಕಡ ಈ ಕೃತ್ಯವನ್ನು ಖಂಡಿಸುತ್ತಾ ಈ ದಾಳಿಯು ನಮ್ಮ ದೇಶದ ಮೇಲೆ ಹೇಡಿಗಳು ಮಾಡಿರುವ ದಾಳಿಯಾಗಿದೆ, ಇದರ ಬಗ್ಗೆ ವಾಟ್ಸಪ್ಪ್, ಫೇಸ್ಬುಕ್ ಗಳಲ್ಲಿ ದಾಳಿಕೊರರರು ಮಾಡಿರುವ ಕೃತ್ಯವನ್ನು ಸಮರ್ಥಿಸುವವರನ್ನು ಸಮಾಜ ಬಹಿಷ್ಕರಿಸಬೇಕು, ಖಂಡಿಸ್ಬೇಕು ಅವರೆಲ್ಲರೂ ದೇಶದ್ರೋಹಿಗಳು ಎಂದು ಹೇಳಿದರು.

ವೇದಿಕೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾದ ಅಶೋಕ್ ಕರಿಯನೆಲ ಉಪಸ್ಥಿತರಿದ್ದರು. ಪ್ರಾಸ್ತಾವಿಕವಾಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ಮಾತನಾಡಿದರು.

ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಸರಕಾರಿ ವಕೀಲರುಗಳು ಹಾಜರಿದ್ದರು.

Related posts

ಬಳಂಜ ಶಾಲಾ ಪ್ರಾರಂಭೋತ್ಸವ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya
error: Content is protected !!