22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

ಉಜಿರೆ: ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿ ಹಿಂದೂಗಳ ಮೇಲೆ ಭಯೋತ್ಪಾದಕರು ನಡೆಸಿದ ಹೇಯ ಕೃತ್ಯವನ್ನು ಖಂಡಿಸಿ ಮತ್ತು ದಾಳಿ ಮಾಡಿದ ಭಯೋತ್ಪಾದಕ ಸಂಘಟನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತೀಯ ಸೇನೆಗೆ ಸಂಪೂರ್ಣ ಅಧಿಕಾರ ನೀಡಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಎ.24ರಂದು ರಾತ್ರಿ ಉಜಿರೆ ಸರ್ಕಲ್ ನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಶ್ರದ್ಧಾಂಜಲಿ ಸಭೆ ನಡೆಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ, ಪಾಕಿಸ್ತಾನ ಎಂಬ ಪಾಪಿ ದೇಶ ಭಯೋತ್ಪಾದಕರನ್ನು ಹುಟ್ಟು ಹಾಕಿಸಿ ಅದೆಷ್ಟೋ ಸನಾತನ ಹಿಂದೂಗಳ ರಕ್ತವನ್ನು ಹರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ನಾವು ನಿಮ್ಮ ಕೈಯಲ್ಲಿ ಕೈಯನ್ನು ಬಲ ಪಡಿಸುತ್ತೇವೆ, ಭಾರತ ದೇಶದ ಸೈನಿಕರಿಗೆ ಅವಕಾಶವನ್ನು ಕೊಡಿ ಒಂದೇ ಒಂದು ಗಂಟೆಯಲ್ಲಿ ಪಾಕಿಸ್ತಾನವನ್ನು ಭೂಪಟದಲ್ಲಿ ಇಲ್ಲದಂತೆ ಮಾಡಿ ಬಿಡುತ್ತಾರೆ ಎಂದು ಕಾಶ್ಮೀರದ ಕೃತ್ಯವನ್ನು ಖಂಡಿಸಿದರು.

ನಿವೃತ್ತ ಯೋಧ ಕರುಣಾಕರ ಶೆಟ್ಟಿ ಗೋಳಿತೊಟ್ಟು ಮಾತನಾಡಿ, ಭಯೋತ್ಪಾದನೆಗೆ ಬೆಂಬಲ ನೀಡುವಂತಹ ದೇಶವನ್ನೇ ನಿರ್ನಾಮ ಮಾಡಿದರೆ ಮಾತ್ರ ಭಯೋತ್ಪಾದನೇ ಅಂತ್ಯ ಕಾಣಲು ಸಾಧ್ಯ. ಈ ಸಂದರ್ಭದಲ್ಲಿ ಎಲ್ಲಾ ರಾಜಕೀಯ, ಧರ್ಮ ಬದಿಗಿಟ್ಟು ಕೇಂದ್ರ ಸರ್ಕಾರದ ಬಲಿಷ್ಠ ನಾಯಕ ನರೇಂದ್ರ ಮೋದಿಯವರಿಗೆ ಭಯೋತ್ಪಾದನೆಯನ್ನು ಹಾಗೂ ಸಂಪೂರ್ಣ ಪಾಕಿಸ್ತಾನವನ್ನೇ ನಿರ್ನಾಮ ಮಾಡಲು ಎಲ್ಲಾ ಪಕ್ಷಗಳು, ನಾಯಕರುಗಳು ಬೆಂಬಲ ನೀಡಬೇಕು. ಪ್ರಧಾನಿ ನರೇಂದ್ರ ಮೋದಿಯವರು ತಕ್ಕ ರೀತಿಯ ಪ್ರತಿಕಾರವನ್ನು ನೀಡುತ್ತಾರೆ ಎಂಬ ನಂಬಿಕೆ ನಮಗೆಲ್ಲರಿಗೂ ಇದೆ ಎಂದು ಸಾವಿಗೀಡಾದವರಿಗೆ ಸಂತಾಪ ಸೂಚಿಸಿದರು.

ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಯಿಂದಾಗಿ ಅಗಲಿದವರ ಆತ್ಮಕ್ಕೆ ಶಾಂತಿ ದೊರೆಯಲೆಂದು ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನೀಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಂಜರ್ಪ ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!